ಹೈಕೋರ್ಟ್ನ ಧಾರವಾಡ ಪೀಠಕ್ಕೆ ಯೂಟ್ಯೂಬರ್ ಸಮೀರ್ ಎಂಡಿ ಕೇಸ್, ಏನಿದು ಪ್ರಕರಣ?
- admin_18np
- November 12, 2025
- Blog
- 0 Comments
ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಧಾರವಾಡಕ್ಕೆ ವರ್ಗಾಯಿಸಿದೆ. ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ಸಮೀರ್ ವಿಡಿಯೋ ಮಾಡಿದ್ದರು. ಈ ಸಂಬಂಧ ಬಳ್ಳಾರಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದರು. ಈ ವರ್ಗಾವಣೆಯಿಂದ ಅರ್ಜಿದಾರರು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಇನ್ನೊಂದೆಡೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ತನಿಖೆ ನಡೆಸುವಂತೆ ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಹೈಲೈಟ್ಸ್:
- ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ
- ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ವಿಡಿಯೋ ಪೋಸ್ಟ್ ಮಾಡಿದ್ದ ಸಮೀರ್ ಎಂಡಿ
- ಈ ಸಂಬಂಧ ಸಮೀರ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಬಳ್ಳಾರಿಯ ಕೌಲ್ ಬಜಾರ್ ಠಾಣೆ ಪೊಲೀಸರು
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ನ ಬೆಂಗಳೂರು ಪೀಠವು ಧಾರವಾಡಕ್ಕೆ ವರ್ಗಾಯಿಸಿದೆ.
ಬೆಂಗಳೂರಿನ ಸಮೀರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕ ಸದಸ್ಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿದಾರ ಸಮೀರ್ ಪರ ವಕೀಲರು, ಬಳ್ಳಾರಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಅರ್ಜಿಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ಎಫ್ಐಆರ್ಗೆ ತಡೆ ನೀಡಿ ಮಧ್ಯಂತರ ರಕ್ಷಣೆ ಒದಗಿಸಿರುವುದನ್ನು ಮುಂದುವರಿಸಬೇಕು ಎಂದು ಕೋರಿದರು.





